Uncategorized

ಲಿಂಗಸ್ಗೂರು; ಕರ್ನಾಟಕ ರತ್ನ, ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಜನ್ಮದಿನಾಚರಣೆ ಸಂಭ್ರಮ

ಹನುಮಂತ ನಾಯಕ ಸಂಪಾದಕ.     9739109997

ಕರುಣಾಮಯಿಯ ಸ್ಮಾರಕ ನಿರ್ಮಾಣಕ್ಕೆ ಒತ್ತಾಯ

ಲಿಂಗಸುಗೂರು: ಕರ್ನಾಟಕ ರತ್ನ ಸಾಹಸ ಸಿಂಹ ಡಾಕ್ಟರ್ ವಿಷ್ಣುವರ್ಧನ ಅವರ 75ನೇ ಜನ್ಮದಿನಾಚರಣೆಯನ್ನು ಸಿಹಿ ಹಂಚಿ ಪಟಾಕಿ ಸಿಡಿಸಿ ಅದ್ದೂರಿಯಾಗಿ ಆಚರಿಸಲಾಯಿತು.
ಪಟ್ಟಣದ ಬಸ್ ನಿಲ್ದಾಣದ ಮುಂಬಾಗ ಸ್ವಾಮಿ ವಿವೇಕಾನಂದ ಕಮಾನು ಹತ್ತಿರ ವಿಷ್ಣುವರ್ಧನ್ ಅಭಿಮಾನಿಗಳ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಜನುಮದಿನ ಕಾರ್ಯಕ್ರಮಕ್ಕೆ ಹಿರಿಯ ಪತ್ರಕರ್ತ ಶಿವರಾಜ ಕೆಂಭಾವಿಯವರು ಡಾ.ವಿಷ್ಣುವರ್ಧನ್ ಅವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಇತ್ತೀಚೆಗೆ ನಡೆದ ಸಚಿವ ಸಂಪುಟದ ಸಭೆಯಲ್ಲಿ ಡಾ. ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡುವ ಮೂಲಕ ಅವರಿಗೆ ಗೌರವ ನೀಡಿರುವುದು ಸ್ವಾಗತಾರ್ಹ ಮತ್ತು ತುಂಬಾ ಸಂತೋಷ ತಂದಿದೆ ಎಂದರು. ಅವರ ಸ್ಮಾರಕ ನಿವೇಶನದ ಇತ್ತೀಚಿನ ದಿನಗಳಲ್ಲಿ ಆದ ಬೆಳವಣಿಗೆಗಳು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ ಸರ್ಕಾರ ಅದೇ ಜಾಗದಲ್ಲಿ ಹತ್ತು ಗುಂಟೆ ಭೂಮಿಯನ್ನು ನೀಡಿ ಸ್ಮಾರಕ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿ ಅಭಿಮಾನಿಗಳ ಬಹುದಿನಗಳ ಬೇಡಿಕೆಯನ್ನು ಈಡೇರಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು. ವಿಷ್ಣುವರ್ಧನ್ ಅವರ ಅಭಿನಯದ ನೂರಾರು ಚಿತ್ರಗಳು ಸಾಮಾಜಿಕ ನ್ಯಾಯ, ಕುಟುಂಬ ಆಧಾರಿತ, ದೇಶ ಭಕ್ತಿ ಸೇರಿದಂತೆ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಮೂಲಕ ಅಭಿಮಾನಿಗಳ ಹೃದಯದಲ್ಲಿ ಅಚ್ಚಳಿಯದೆ ಉಳಿದಿದ್ದಾರೆ ಎಂದು ಹೇಳಿದರು.
ಈ ವೇಳೆ ಅಭಿಮಾನಿಗಳ ಬಳಗದ ಮಹಾಂತೇಶ ಹೂಗಾರ, ಅಶೋಕ ದಿಗ್ಗಾವಿ, ಭೀಮಸೇನ ಕುಲಕರ್ಣಿ, ಮಾದೇಶ್ ಸರ್ಜಾಪುರ, ಮಲ್ಲಿಕಾರ್ಜುನ ಕೆಂಭಾವಿ, ಮಂಜುನಾಥ ಪಾಟೀಲ್, ಸಲಿಮ್ ಸ್ವದೇಶಿ, ಪಂಪಣ್ಣ ಹೂಗಾರ, ತಿಮ್ಮಣ್ಣ ಬೋವಿ, ವರ್ಮಾ ಮುದಗಲ್, ಹನುಮೇಶ ಹೂಗಾರ, ಪರಶುರಾಮ ಕೆಂಭಾವಿ, ಸಾದತ್ ಅಲಿ, ಪ್ರಮೋದ್ ಕನಕಗಿರಿ, ಯಲ್ಲಪ್ಪ ಬಾಲಗಾವಿ, ಪರಶುರಾಮ ಮುಂಡೆವಾಡಿ, ಮುನ್ನಾ, ರಾಮು ಡ್ರೈವರ್ ಸೇರಿದಂತೆ ಅಪಾರ ಅಭಿಮಾನಿಗಳು ಪಾಲ್ಗೊಂಡಿದ್ದರು.

Hanumanth Nayaka

ಹನುಮಂತ ನಾಯಕ ಮಟ್ಟೂರಿನ ಸಾಂಸ್ಕೃತಿಕ ಪರಂಪರೆ ಮತ್ತು ಸಮಾಜಮುಖಿ ಚಟುವಟಿಕೆಗಳಿಗೆ ಶಕ್ತಿ ತುಂಬುತ್ತಿರುವ ಪ್ರಮುಖ ವ್ಯಕ್ತಿಗಳಲ್ಲೊಬ್ಬರಾದ ಹನುಮಂತ ನಾಯಕರು, “ಕಲ್ಯಾಣ ವೈಭವ” ಪತ್ರಿಕೆಯ ಗೌರವಾನ್ವಿತ ಸಂಪಾದಕರಾಗಿದ್ದಾರೆ. ಸಮೂಹ ಸೇವೆ, ಮಾಹಿತಿ ಹಂಚಿಕೆ ಮತ್ತು ಗ್ರಾಮೀಣ ಅಭ್ಯುದಯದ ಬಗ್ಗೆ ಅವರಿಗಿರುವ ಗಾಢ ಬದ್ಧತೆ ಅವರಿಗೆ ವಿಶಿಷ್ಟ ಗುರುತನ್ನು ತಂದಿದೆ. ಸಮಾಜದ ಪ್ರತಿಯೊಂದು ಮುಖ್ಯ ಕ್ಷಣ—ಮದುವೆ ಸಮಾರಂಭಗಳು, ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರತಿಭಾವಂತರ ಸಾಧನೆಗಳು ಮತ್ತು ಗ್ರಾಮಾಭಿವೃದ್ಧಿ ಚಟುವಟಿಕೆಗಳನ್ನು ನಿಖರವಾಗಿ ದಾಖಲಿಸಿ ಜನತೆಗೆ ತಲುಪಿಸುವುದು ಅವರ ಮುಖ್ಯ ಧ್ಯೇಯ. ಅವರ ಸಂಪಾದಕೀಯ ಶೈಲಿ ಸ್ಪಷ್ಟ, ಜವಾಬ್ದಾರಿಯುತ ಮತ್ತು ಓದುಗರನ್ನು ಜತೆಗೇ ಸಾಗಿಸುವಂತಿದೆ. ಮಟ್ಟೂರು ಪ್ರದೇಶದಲ್ಲಿ ನಂಬಿಕೆ, ನಿಷ್ಠೆ ಮತ್ತು ಸೇವಾಭಾವನೆಗೆ ಪ್ರತೀಕವಾಗಿ ಗುರುತಿಸಿಕೊಂಡಿರುವ ಹನುಮಂತ ನಾಯಕರವರು, ತಮ್ಮ ಮಾಧ್ಯಮದ ಮೂಲಕ ಸಮಾಜದ ಒಗ್ಗಟ್ಟು, ಸಂಸ್ಕೃತಿ ಸಂರಕ್ಷಣೆ ಮತ್ತು ಜನಜಾಗೃತಿ ಮೂಡಿಸುವ ಪ್ರಯತ್ನಗಳಲ್ಲಿ ಸದಾ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಗ್ರಾಮದ ಅಭಿವೃದ್ದಿಗಾಗಿ ತಮ್ಮ ಜ್ಞಾನ, ಸಮಯ ಮತ್ತು ಶ್ರಮವನ್ನು ವಿನಯದಿಂದ ಹೂಡುತ್ತಿರುವ ಅವರ ಕೆಲಸವು ಮಟ್ಟುರು ಸಮುದಾಯಕ್ಕೆ ಅಮೂಲ್ಯ ಕೊಡುಗೆಯಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!