Uncategorized

ಮುದಗಲ್; ಬ್ಲಾಕ್ ಕಾಂಗ್ರೆಸ್ ಎಸ್ಸಿ ಹಾಗೂ ಎಸ್ಟಿ ಸೆಲ್ ಪದಾಧಿಕಾರಿಗಳ ಪದಗ್ರಹಣ

ಮುದಗಲ್ : ಮಾಜಿ ಶಾಸಕ ಹೂಲಗೇರಿ ರವರ ನಿವಾಸದಲ್ಲಿ ರವಿವಾರ ಬ್ಲಾಕ್ ಕಾಂಗ್ರೆಸ್ ಎಸ್ಸಿ ಹಾಗೂ ಎಸ್ಟಿ ಸೆಲ್ ಪದಾಧಿಕಾರಿಗಳ ಪದಗ್ರಹಣ ಜರುಗಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶಂಕರಗೌಡ ಉಪ್ಪಾರನಂದಿಹಾಳ ಮಾತನಾಡಿ ನಾವು ನೀವೆಲ್ಲರೂ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟನೆ ಮಾಡಿ ಪಕ್ಷ ಅಧಿಕಾರಕ್ಕೆ ತರಲು ಎಲ್ಲಾರೂ ಪ್ರಯತ್ನಿಸಬೇಕು ಎಂದರು. ನಂತರ ಮಾಜಿ ಶಾಸಕ ಡಿ ಎಸ್ ಹುಲಗೇರಿ ಮಾತನಾಡಿ ನಾನು ವಿರೋಧ ಪಕ್ಷದ ಶಾಸಕರಾಗಿದ್ದರು ಕೂಡ ತಾಲೂಕಿಗೆ ಕೋಟ್ಯಾಂತರ ರೂಪಾಯಿ ಅನುದಾನ ತಂದು ಲಿಂಗಸುಗೂರು ತಾಲೂಕ ಅಭಿವೃದ್ಧಿ ಮಾಡುತ್ತಿದ್ದೇನೆ. ಆದರೆ ಇವಗ
ಅಧಿಕಾರದಲ್ಲಿ ಇದ್ದವರು ಮುದಗಲ್ ಪಟ್ಟಣದ ಕುಡಿಯುವ ನೀರು ಸೇರಿದಂತೆ ತಾಲ್ಲೂಕಿನ ಅಭಿವೃದ್ಧಿ ಶ್ರಮಿಸಬೇಕು ನಾನು ಸೋತರು ಜನರ ಸೇವೆ ಮಾಡುತ್ತಿದ್ದೇನೆ ಎಂದು ಹೇಳಿದರು. ಈ ವೇಳೆ ಮುದಗಲ್ ಬ್ಲಾಕ್ ಕಾಂಗ್ರೆಸ್ (ಪರಿಶಿಷ್ಟ ಜಾತಿ) ಘಟಕದ ಅಧ್ಯಕ್ಷರಾಗಿ ಕೃಷ್ಣ ಚಲುವಾದಿ, ಪರಿಶಿಷ್ಟ ಪಂಗಡದ ಅಧ್ಯಕ್ಷರಾಗಿ ಹನುಮೇಶ ನಾಯಕ, ಅಧಿಕಾರಿ ಸ್ವೀಕಾರ ಮಾಡಿದರು. ಇದೆ ವೇಳೆ ಎಪಿಎಂಸಿ ನಾಮ ನಿರ್ದೇಶನ ಸದಸ್ಯರಿಗೆ ಸನ್ಮಾನ ಮಾಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಉಪಾಧ್ಯಕ್ಷ ಎಸ್ ಕೆ ಅಜ್ಮಿರ್ ಬೆಳ್ಳಿಕಟ್, ಸದಸ್ಯರಾದ ಮೈಬುಬಸಾಬ ಕಡ್ಡಿಪುಡಿ,ಎಸ್, ಆರ್, ರಸೂಲ್, ಕೆಡಿಪಿ ಸದಸ್ಯ ಪರಮೇಶ ಕನ್ನಾಪೂರುಹಟ್ಟಿ, ಕಂಟೆಪ್ಪಗೌಡ ವ್ಯಾಕರನಾಳ, ಚಂದ್ರಶೇಖರ ನಾಯಕ, ರಾಘವೇಂದ್ರ ಕುದರಿ, ಸಂಗಮೇಶ ನಾಯಕ ಸಂಗಪ್ಪ ಹಿರೇಮನಿ ಸೇರಿದಂತೆ ಮುಂತಾದವರು ಇದ್ದರು.

Hanumanth Nayaka

ಹನುಮಂತ ನಾಯಕ ಮಟ್ಟೂರಿನ ಸಾಂಸ್ಕೃತಿಕ ಪರಂಪರೆ ಮತ್ತು ಸಮಾಜಮುಖಿ ಚಟುವಟಿಕೆಗಳಿಗೆ ಶಕ್ತಿ ತುಂಬುತ್ತಿರುವ ಪ್ರಮುಖ ವ್ಯಕ್ತಿಗಳಲ್ಲೊಬ್ಬರಾದ ಹನುಮಂತ ನಾಯಕರು, “ಕಲ್ಯಾಣ ವೈಭವ” ಪತ್ರಿಕೆಯ ಗೌರವಾನ್ವಿತ ಸಂಪಾದಕರಾಗಿದ್ದಾರೆ. ಸಮೂಹ ಸೇವೆ, ಮಾಹಿತಿ ಹಂಚಿಕೆ ಮತ್ತು ಗ್ರಾಮೀಣ ಅಭ್ಯುದಯದ ಬಗ್ಗೆ ಅವರಿಗಿರುವ ಗಾಢ ಬದ್ಧತೆ ಅವರಿಗೆ ವಿಶಿಷ್ಟ ಗುರುತನ್ನು ತಂದಿದೆ. ಸಮಾಜದ ಪ್ರತಿಯೊಂದು ಮುಖ್ಯ ಕ್ಷಣ—ಮದುವೆ ಸಮಾರಂಭಗಳು, ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರತಿಭಾವಂತರ ಸಾಧನೆಗಳು ಮತ್ತು ಗ್ರಾಮಾಭಿವೃದ್ಧಿ ಚಟುವಟಿಕೆಗಳನ್ನು ನಿಖರವಾಗಿ ದಾಖಲಿಸಿ ಜನತೆಗೆ ತಲುಪಿಸುವುದು ಅವರ ಮುಖ್ಯ ಧ್ಯೇಯ. ಅವರ ಸಂಪಾದಕೀಯ ಶೈಲಿ ಸ್ಪಷ್ಟ, ಜವಾಬ್ದಾರಿಯುತ ಮತ್ತು ಓದುಗರನ್ನು ಜತೆಗೇ ಸಾಗಿಸುವಂತಿದೆ. ಮಟ್ಟೂರು ಪ್ರದೇಶದಲ್ಲಿ ನಂಬಿಕೆ, ನಿಷ್ಠೆ ಮತ್ತು ಸೇವಾಭಾವನೆಗೆ ಪ್ರತೀಕವಾಗಿ ಗುರುತಿಸಿಕೊಂಡಿರುವ ಹನುಮಂತ ನಾಯಕರವರು, ತಮ್ಮ ಮಾಧ್ಯಮದ ಮೂಲಕ ಸಮಾಜದ ಒಗ್ಗಟ್ಟು, ಸಂಸ್ಕೃತಿ ಸಂರಕ್ಷಣೆ ಮತ್ತು ಜನಜಾಗೃತಿ ಮೂಡಿಸುವ ಪ್ರಯತ್ನಗಳಲ್ಲಿ ಸದಾ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಗ್ರಾಮದ ಅಭಿವೃದ್ದಿಗಾಗಿ ತಮ್ಮ ಜ್ಞಾನ, ಸಮಯ ಮತ್ತು ಶ್ರಮವನ್ನು ವಿನಯದಿಂದ ಹೂಡುತ್ತಿರುವ ಅವರ ಕೆಲಸವು ಮಟ್ಟುರು ಸಮುದಾಯಕ್ಕೆ ಅಮೂಲ್ಯ ಕೊಡುಗೆಯಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!