World

ಮುದಗಲ್ ; ಪುರಸಭೆ ಸಿಬ್ಬಂದಿಗಳನ್ನು ಖಾಯಂ ಮಾಡುವಂತೆ ಸಚಿವರಿಗೆ ಪುರಸಭೆ ಅಧ್ಯಕ್ಷರು ಮನವಿ

ಹನುಮಂತ ನಾಯಕ

ಮುದಗಲ್: ಪುರಸಭೆಯಲ್ಲಿ ಸುಮಾರು 25 ವರ್ಷಗಳಿಂದ ದಿನಗೂಲಿ ಹಾಗೂ ಹೊರಗುತ್ತಿಗೆ ಆಧಾರ ಮೇಲೆ ಕಾರ್ಯ ನಿರ್ವಹಿಸುತ್ತಿರುವರನ್ನು ಕಾಯಂ ಮಾಡುವಂತೆ ಪೌರಾಡಳಿತ ಸಚಿವರಾದ ರಹೀಂಖಾನ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ಹಾಗೂ
ನೀರು ಸರಬರಾಜು ಸಿಬ್ಬಂದಿಗಳು ಕಾರ್ಯನಿರ್ವಾಸುತ್ತಿದ್ದು. ಅವರಿಗೆ ಪುರಸಭೆಯಿಂದ ಪ್ರತಿ ತಿಂಗಳು ವೇತನ ಪಾವತಿಸುವು ತುಂಬಾ ಕಷ್ಟ ಸಾಧ್ಯವಾಗುತ್ತಿದ್ದು. ಹಾಗೂ ಸ್ವಚ್ಚತೆ ಕಾರ್ಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಾಹನ ಚಾಲಕರು& ಸ್ಯಾನಿಟರಿ ಸುಪ್ರವೈಸರ್, ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾಟಾ ಎಂಟ್ರಿ ಆಪರೇಟರ್ ನೌಕರರ ಹುದ್ದೆಯನ್ನು ಕೂಡಲೇ ಖಾಯಂಮಾತಿ/ನೇರಪಾವತಿ ಮಾಡಿದಲ್ಲಿ ಸದರಿ ನೌಕರರಿಗೆ ಅನೂಕೂಲವಾಗುತ್ತದೆ. ಆದ್ದರಿಂದ ನೀವುಗಳು ಪುರಸಭೆಯ ಈ ಎಲ್ಲಾ ದಿನಗೂಲಿ ಹಾಗೂ ಹೊರಗುತ್ತಿಗೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಖಾಯಂ ಮಾಡುವಂತೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸದಸ್ಯ ಹನುಮಂತ ವಾಲ್ಮೀಕಿ ಸೇರಿದಂತೆ ಇನ್ನಿತರರು ಇದ್ದರು.

Hanumanth Nayaka

ಹನುಮಂತ ನಾಯಕ ಮಟ್ಟೂರಿನ ಸಾಂಸ್ಕೃತಿಕ ಪರಂಪರೆ ಮತ್ತು ಸಮಾಜಮುಖಿ ಚಟುವಟಿಕೆಗಳಿಗೆ ಶಕ್ತಿ ತುಂಬುತ್ತಿರುವ ಪ್ರಮುಖ ವ್ಯಕ್ತಿಗಳಲ್ಲೊಬ್ಬರಾದ ಹನುಮಂತ ನಾಯಕರು, “ಕಲ್ಯಾಣ ವೈಭವ” ಪತ್ರಿಕೆಯ ಗೌರವಾನ್ವಿತ ಸಂಪಾದಕರಾಗಿದ್ದಾರೆ. ಸಮೂಹ ಸೇವೆ, ಮಾಹಿತಿ ಹಂಚಿಕೆ ಮತ್ತು ಗ್ರಾಮೀಣ ಅಭ್ಯುದಯದ ಬಗ್ಗೆ ಅವರಿಗಿರುವ ಗಾಢ ಬದ್ಧತೆ ಅವರಿಗೆ ವಿಶಿಷ್ಟ ಗುರುತನ್ನು ತಂದಿದೆ. ಸಮಾಜದ ಪ್ರತಿಯೊಂದು ಮುಖ್ಯ ಕ್ಷಣ—ಮದುವೆ ಸಮಾರಂಭಗಳು, ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರತಿಭಾವಂತರ ಸಾಧನೆಗಳು ಮತ್ತು ಗ್ರಾಮಾಭಿವೃದ್ಧಿ ಚಟುವಟಿಕೆಗಳನ್ನು ನಿಖರವಾಗಿ ದಾಖಲಿಸಿ ಜನತೆಗೆ ತಲುಪಿಸುವುದು ಅವರ ಮುಖ್ಯ ಧ್ಯೇಯ. ಅವರ ಸಂಪಾದಕೀಯ ಶೈಲಿ ಸ್ಪಷ್ಟ, ಜವಾಬ್ದಾರಿಯುತ ಮತ್ತು ಓದುಗರನ್ನು ಜತೆಗೇ ಸಾಗಿಸುವಂತಿದೆ. ಮಟ್ಟೂರು ಪ್ರದೇಶದಲ್ಲಿ ನಂಬಿಕೆ, ನಿಷ್ಠೆ ಮತ್ತು ಸೇವಾಭಾವನೆಗೆ ಪ್ರತೀಕವಾಗಿ ಗುರುತಿಸಿಕೊಂಡಿರುವ ಹನುಮಂತ ನಾಯಕರವರು, ತಮ್ಮ ಮಾಧ್ಯಮದ ಮೂಲಕ ಸಮಾಜದ ಒಗ್ಗಟ್ಟು, ಸಂಸ್ಕೃತಿ ಸಂರಕ್ಷಣೆ ಮತ್ತು ಜನಜಾಗೃತಿ ಮೂಡಿಸುವ ಪ್ರಯತ್ನಗಳಲ್ಲಿ ಸದಾ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಗ್ರಾಮದ ಅಭಿವೃದ್ದಿಗಾಗಿ ತಮ್ಮ ಜ್ಞಾನ, ಸಮಯ ಮತ್ತು ಶ್ರಮವನ್ನು ವಿನಯದಿಂದ ಹೂಡುತ್ತಿರುವ ಅವರ ಕೆಲಸವು ಮಟ್ಟುರು ಸಮುದಾಯಕ್ಕೆ ಅಮೂಲ್ಯ ಕೊಡುಗೆಯಾಗಿದೆ.

Leave a Reply

Your email address will not be published. Required fields are marked *

Back to top button
error: Content is protected !!