World

ಮುದಗಲ್ ಕಳ್ಳರ ಬಂಧನ ; ಆರೋಪಿಗಳಿಂದ 10 ಗ್ರಾಂ ಚಿನ್ನ ಹಾಗೂ ಎರಡು ಲಕ್ಷ ಹಣ ವಶಕ್ಕೆ ಪಡೆದ ಪೊಲೀಸರು

ಹನುಮಂತ ನಾಯಕ ಸಂಪಾದಕರು

ಮುದಗಲ್ : ಇತ್ತೀಚೆಗೆ ನಡೆದಿದ್ದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳ್ಳನನ್ನು ಬಂಧಿಸಿ, ಆತನಿಂದ 2 ಲಕ್ಷ ಹಣ ಹಾಗೂ 10 ಗ್ರಾಂ ಚಿನ್ನದ ಆಭರಣಗಳನ್ನ ಮರುವಶಪಡಿಸಿಕೊಳ್ಳುವಲ್ಲಿ ಸ್ಥಳೀಯ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಪಿಎಸ್ಐ ವೆಂಕಟೇಶ 11-02-25 ರಂದು ನಾಗರಹಾಳ ಗ್ರಾಮದಲ್ಲಿ ಶಂಕ್ರಮ್ಮ ಗಂ ಶಿವುಪುತ್ರಪ್ಪ ಹಾಗೂ 27-04-25 ರಂದು ರಂದು ಅಶೋಕ್ ತಂದೆ ವೀರುಪಾಕ್ಷಪ್ಪ ನಾಗರಾಳ ಎನ್ನುವವರ ಮನೆ ಕಳ್ಳತನಾಗಿದ್ದು ಇವರ ಪ್ರಕರಣ ದಾಖಲಾಗಿದ್ದು. ಈ ಪ್ರಕರಣಗಳ ಪತ್ತೆ ಕುರಿತು ರಾಯಚೂರು ಜಿಲ್ಲಾ ಎಸ್ಪಿ ಪುಟ್ಟಮಾದಯ್ಯ, ಜಿಲ್ಲಾ ಪೋಲಿಸ್ ಅಧೀಕ್ಷಕರಾದ ಕುಮಾರಸ್ವಾಮಿ, ಹೆಚ್ಚುವರಿ ಅಧೀಕ್ಷಕರಾದ ಜಿ.ಹರೀಶ್ ಲಿಂಗಸ್ಗೂರು ಡಿವೈಎಸ್​ ಅವರ ನೇತೃತ್ವದಲ್ಲಿ ಸ್ಥಳೀಯ ಪಿಎಸ್ಐ ವೆಂಕಟೇಶ ಸಿಬ್ಬಂದಿಗಳಾದ ವೆಂಕಟೇಶ ಎಚ್, ಅಮರೇಶ ಎಚ್ ಕೆ, ಹನುಮಂತ, ಅನೀಲ್ ಕುಮಾರ್ ಇವರನ್ನೊಳಗೊಂಡವಿಶೇಷ ತಂಡ ರಚಿಸಲಾಗಿತ್ತು. ಈ ವಿಶೇಷ ತಂಡದಿಂದ ಆರೋಪಿ ಶಿವಪ್ಪ ಶೇಖರಪ್ಪ ನಾಗರಾಹಾಳ ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಒಟ್ಟು ಅಂದಾಜು 3 ಲಕ್ಷ ವಶ ಪಡಿಸಿಕೊಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಸಿಬ್ಬಂದಿಗಳು ಇದ್ದರು.

Hanumanth Nayaka

ಹನುಮಂತ ನಾಯಕ ಮಟ್ಟೂರಿನ ಸಾಂಸ್ಕೃತಿಕ ಪರಂಪರೆ ಮತ್ತು ಸಮಾಜಮುಖಿ ಚಟುವಟಿಕೆಗಳಿಗೆ ಶಕ್ತಿ ತುಂಬುತ್ತಿರುವ ಪ್ರಮುಖ ವ್ಯಕ್ತಿಗಳಲ್ಲೊಬ್ಬರಾದ ಹನುಮಂತ ನಾಯಕರು, “ಕಲ್ಯಾಣ ವೈಭವ” ಪತ್ರಿಕೆಯ ಗೌರವಾನ್ವಿತ ಸಂಪಾದಕರಾಗಿದ್ದಾರೆ. ಸಮೂಹ ಸೇವೆ, ಮಾಹಿತಿ ಹಂಚಿಕೆ ಮತ್ತು ಗ್ರಾಮೀಣ ಅಭ್ಯುದಯದ ಬಗ್ಗೆ ಅವರಿಗಿರುವ ಗಾಢ ಬದ್ಧತೆ ಅವರಿಗೆ ವಿಶಿಷ್ಟ ಗುರುತನ್ನು ತಂದಿದೆ. ಸಮಾಜದ ಪ್ರತಿಯೊಂದು ಮುಖ್ಯ ಕ್ಷಣ—ಮದುವೆ ಸಮಾರಂಭಗಳು, ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರತಿಭಾವಂತರ ಸಾಧನೆಗಳು ಮತ್ತು ಗ್ರಾಮಾಭಿವೃದ್ಧಿ ಚಟುವಟಿಕೆಗಳನ್ನು ನಿಖರವಾಗಿ ದಾಖಲಿಸಿ ಜನತೆಗೆ ತಲುಪಿಸುವುದು ಅವರ ಮುಖ್ಯ ಧ್ಯೇಯ. ಅವರ ಸಂಪಾದಕೀಯ ಶೈಲಿ ಸ್ಪಷ್ಟ, ಜವಾಬ್ದಾರಿಯುತ ಮತ್ತು ಓದುಗರನ್ನು ಜತೆಗೇ ಸಾಗಿಸುವಂತಿದೆ. ಮಟ್ಟೂರು ಪ್ರದೇಶದಲ್ಲಿ ನಂಬಿಕೆ, ನಿಷ್ಠೆ ಮತ್ತು ಸೇವಾಭಾವನೆಗೆ ಪ್ರತೀಕವಾಗಿ ಗುರುತಿಸಿಕೊಂಡಿರುವ ಹನುಮಂತ ನಾಯಕರವರು, ತಮ್ಮ ಮಾಧ್ಯಮದ ಮೂಲಕ ಸಮಾಜದ ಒಗ್ಗಟ್ಟು, ಸಂಸ್ಕೃತಿ ಸಂರಕ್ಷಣೆ ಮತ್ತು ಜನಜಾಗೃತಿ ಮೂಡಿಸುವ ಪ್ರಯತ್ನಗಳಲ್ಲಿ ಸದಾ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಗ್ರಾಮದ ಅಭಿವೃದ್ದಿಗಾಗಿ ತಮ್ಮ ಜ್ಞಾನ, ಸಮಯ ಮತ್ತು ಶ್ರಮವನ್ನು ವಿನಯದಿಂದ ಹೂಡುತ್ತಿರುವ ಅವರ ಕೆಲಸವು ಮಟ್ಟುರು ಸಮುದಾಯಕ್ಕೆ ಅಮೂಲ್ಯ ಕೊಡುಗೆಯಾಗಿದೆ.

Leave a Reply

Your email address will not be published. Required fields are marked *

Back to top button
error: Content is protected !!