Uncategorized

ಕುಡಿಯುವ ನೀರಿಗಾಗಿ ಮುದಗಲ್ ನಿಂದ ಹಟ್ಟಿ ಪಟ್ಟಣಕ್ಕೆ ಪಾದಯಾತ್ರೆ; ನಯೀಮ್

ಹನುಮಂತ ನಾಯಕ ಸಂಪಾದಕರು.    -9739109997

ಮುದಗಲ್: ಸ್ಥಳೀಯ ಪುರಸಭೆ ಪಟ್ಟಣ ಮುಖಾಂತರ ಹಟ್ಟಿ ಪಟ್ಟಣಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಸ್ವಾಭಿಮಾನ ಸೇನೆ ಸಂಘಟನೆ ವತಿಯಿಂದ ಪಾದಯಾತ್ರೆ ಮಾಡಲಾಗುತ್ತದೆ ಎಂದು ಕರವೇ ಅಧ್ಯಕ್ಷ ಎಸ್ ಎ ನಯಿಂ ಹೇಳಿದರು. ಪಟ್ಟಣದ ಪತ್ರಿಕೆ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನಾವು18 ವರ್ಷಗಳಿಂದ ಸಂಘಟನೆ ಮೂಲಕ ಐತಿಹಾಸಿಕ ಮುದಗಲ್ ಪಟ್ಟಣ ತಾಲೂಕನ್ನಾಗಿ ಘೋಷಣೆ ಮಾಡುವಂತೆ. ಹಾಗೂ ಕುಡಿಯುವ ನೀರಿಗಾಗಿ ಹೋರಾಟ ಮಾಡುತ್ತಾ ಬಂದಿದ್ದೇವೆ ಹಾಗೂ ಮೇ 13 ರಂದು ಮುದಗಲ್ ಪಟ್ಟಣವನ್ನು ಕೂಡ ಸಂಪೂರ್ಣ ಬಂದ್ ಮಾಡಲಾಗಿತ್ತು. ಆದರೆ ಇದುವರೆಗೂ ಪಟ್ಟಣವನ್ನು ತಾಲೂಕನ್ನಾಗಿ ಮಾಡುತ್ತಿಲ್ಲ.

ಇದೇ ಆಗಸ್ಟ್ 6 ರಂದು ಹಟ್ಟಿ ಪಟ್ಟಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಆಗಮಿಸುತ್ತಿರುವುದುರಿಂದ. ನಮ್ಮ
ಐತಿಹಾಸಿಕ ಪಟ್ಟಣಕ್ಕೆ 10 ದಿನಕ್ಕೊಮ್ಮೆ ಕುಡಿಯುವ ನೀರು ಬರುತ್ತಿದ್ದು ಆದ್ದರಿಂದ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸುವಂತೆ ಅಗಸ್ಟ್ 5 ರಂದು ಮುದಗಲ್ ಪಟ್ಟಣದ ಪುರಸಭೆ ಮುಂಭಾಗದಿಂದ ಹಟ್ಟಿ ಪಟ್ಟಣಕ್ಕೆ ಪಾದಯಾತ್ರೆ ಮಾಡುತ್ತಿದ್ದೇವೆ. ಈ ಪಾದಯಾತ್ರೆಯಲ್ಲಿ ಮುದಗಲ್ ನಾ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಆಗಮಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಕರವೇ ಅಧ್ಯಕ್ಷ ಎಸ್ ಎ ನಯೀಮ್, ಸಂತೋಷ ಕುಮಾರ್, ಸಾಬು ಹುಸೇನ್, ಎಸ್ ಎನ್ ಖಾದ್ರಿ, ಭೀಮಣ್ಣ ಉಪ್ಪಾರ, ಅಬ್ದುಲ್ ಮಜೀದ್, ಮಹಾಂತೇಶ ಚಟ್ಟರ್ ಸೇರಿದಂತೆ ಇನ್ನಿತರರು ಇದ್ದರು.

Hanumanth Nayaka

ಹನುಮಂತ ನಾಯಕ ಮಟ್ಟೂರಿನ ಸಾಂಸ್ಕೃತಿಕ ಪರಂಪರೆ ಮತ್ತು ಸಮಾಜಮುಖಿ ಚಟುವಟಿಕೆಗಳಿಗೆ ಶಕ್ತಿ ತುಂಬುತ್ತಿರುವ ಪ್ರಮುಖ ವ್ಯಕ್ತಿಗಳಲ್ಲೊಬ್ಬರಾದ ಹನುಮಂತ ನಾಯಕರು, “ಕಲ್ಯಾಣ ವೈಭವ” ಪತ್ರಿಕೆಯ ಗೌರವಾನ್ವಿತ ಸಂಪಾದಕರಾಗಿದ್ದಾರೆ. ಸಮೂಹ ಸೇವೆ, ಮಾಹಿತಿ ಹಂಚಿಕೆ ಮತ್ತು ಗ್ರಾಮೀಣ ಅಭ್ಯುದಯದ ಬಗ್ಗೆ ಅವರಿಗಿರುವ ಗಾಢ ಬದ್ಧತೆ ಅವರಿಗೆ ವಿಶಿಷ್ಟ ಗುರುತನ್ನು ತಂದಿದೆ. ಸಮಾಜದ ಪ್ರತಿಯೊಂದು ಮುಖ್ಯ ಕ್ಷಣ—ಮದುವೆ ಸಮಾರಂಭಗಳು, ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರತಿಭಾವಂತರ ಸಾಧನೆಗಳು ಮತ್ತು ಗ್ರಾಮಾಭಿವೃದ್ಧಿ ಚಟುವಟಿಕೆಗಳನ್ನು ನಿಖರವಾಗಿ ದಾಖಲಿಸಿ ಜನತೆಗೆ ತಲುಪಿಸುವುದು ಅವರ ಮುಖ್ಯ ಧ್ಯೇಯ. ಅವರ ಸಂಪಾದಕೀಯ ಶೈಲಿ ಸ್ಪಷ್ಟ, ಜವಾಬ್ದಾರಿಯುತ ಮತ್ತು ಓದುಗರನ್ನು ಜತೆಗೇ ಸಾಗಿಸುವಂತಿದೆ. ಮಟ್ಟೂರು ಪ್ರದೇಶದಲ್ಲಿ ನಂಬಿಕೆ, ನಿಷ್ಠೆ ಮತ್ತು ಸೇವಾಭಾವನೆಗೆ ಪ್ರತೀಕವಾಗಿ ಗುರುತಿಸಿಕೊಂಡಿರುವ ಹನುಮಂತ ನಾಯಕರವರು, ತಮ್ಮ ಮಾಧ್ಯಮದ ಮೂಲಕ ಸಮಾಜದ ಒಗ್ಗಟ್ಟು, ಸಂಸ್ಕೃತಿ ಸಂರಕ್ಷಣೆ ಮತ್ತು ಜನಜಾಗೃತಿ ಮೂಡಿಸುವ ಪ್ರಯತ್ನಗಳಲ್ಲಿ ಸದಾ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಗ್ರಾಮದ ಅಭಿವೃದ್ದಿಗಾಗಿ ತಮ್ಮ ಜ್ಞಾನ, ಸಮಯ ಮತ್ತು ಶ್ರಮವನ್ನು ವಿನಯದಿಂದ ಹೂಡುತ್ತಿರುವ ಅವರ ಕೆಲಸವು ಮಟ್ಟುರು ಸಮುದಾಯಕ್ಕೆ ಅಮೂಲ್ಯ ಕೊಡುಗೆಯಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!