Uncategorized

ಸಚಿವ ಪ್ರಿಯಾಂಕ್ ಖರ್ಗೆ ರವರ ಹುಟ್ಟು ಹಬ್ಬ ಆಚರಣೆ

ಹನುಮಂತ ನಾಯಕ ಸಂಪಾದಕ.      9739109997

ಮುದಗಲ್ : ಮುದಗಲ್ ಬ್ಲಾಕ್ ಕಾಂಗ್ರೆಸ್ ಯುವ ಘಟಕದ ವತಿಯಿಂದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ರವರ ಹುಟ್ಟು ಹಬ್ಬ ಆಚರಣೆ ಮಾಡಿದರು.

ಅಧ್ಯಕ್ಷ ಅಬ್ದುಲ್ ಖದೀರ್  ರವರ ನೇತೃತ್ವದಲ್ಲಿ ಸಮುದಾಯದ ಆರೋಗ್ಯ ಕೇಂದ್ರದಲ್ಲಿ ಬಡ ರೋಗಿಗಳಿಗೆ ಹಣ್ಣು,ಬ್ರೆಡ್, ಹಾಲು ವಿತರಣೆ ಮಾಡುವ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ರವರ ಹುಟ್ಟು ಹಬ್ಬ ಆಚರಣೆ ಮಾಡಿದರು.

ಇದೆ ವೇಳೆ ಯುವ ಘಟಕದ ರಾಯಚೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನ್ನಾಬಾಯಿ ಮಾತನಾಡಿ ಮುಂದಿನ ದಿನಗಳಲ್ಲಿ ಪ್ರಿಯಾಂಕ್ ಖರ್ಗೆ ರವರು ರಾಜ್ಯದ ಗೃಹ ಸಚಿವರಾಗಿಲಿ ಎಂದರು.

ಈ ಸಂದರ್ಭದಲ್ಲಿ ಮೌನೇಶ ಚಲುವಾದಿ,ಮಹಮ್ಮದ್ ಕೋರಿ, ಪರಶುರಾಮ ಹಿರೇಮನಿ, ಇಸ್ಮಾಯಿಲ್ ಕೊಳ್ಳಿ,
ಬಂದೇನವಾಜ, ಸೇರಿದಂತೆ ಮುಂತಾದವರು ಇದ್ದರು

Hanumanth Nayaka

ಹನುಮಂತ ನಾಯಕ ಮಟ್ಟೂರಿನ ಸಾಂಸ್ಕೃತಿಕ ಪರಂಪರೆ ಮತ್ತು ಸಮಾಜಮುಖಿ ಚಟುವಟಿಕೆಗಳಿಗೆ ಶಕ್ತಿ ತುಂಬುತ್ತಿರುವ ಪ್ರಮುಖ ವ್ಯಕ್ತಿಗಳಲ್ಲೊಬ್ಬರಾದ ಹನುಮಂತ ನಾಯಕರು, “ಕಲ್ಯಾಣ ವೈಭವ” ಪತ್ರಿಕೆಯ ಗೌರವಾನ್ವಿತ ಸಂಪಾದಕರಾಗಿದ್ದಾರೆ. ಸಮೂಹ ಸೇವೆ, ಮಾಹಿತಿ ಹಂಚಿಕೆ ಮತ್ತು ಗ್ರಾಮೀಣ ಅಭ್ಯುದಯದ ಬಗ್ಗೆ ಅವರಿಗಿರುವ ಗಾಢ ಬದ್ಧತೆ ಅವರಿಗೆ ವಿಶಿಷ್ಟ ಗುರುತನ್ನು ತಂದಿದೆ. ಸಮಾಜದ ಪ್ರತಿಯೊಂದು ಮುಖ್ಯ ಕ್ಷಣ—ಮದುವೆ ಸಮಾರಂಭಗಳು, ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರತಿಭಾವಂತರ ಸಾಧನೆಗಳು ಮತ್ತು ಗ್ರಾಮಾಭಿವೃದ್ಧಿ ಚಟುವಟಿಕೆಗಳನ್ನು ನಿಖರವಾಗಿ ದಾಖಲಿಸಿ ಜನತೆಗೆ ತಲುಪಿಸುವುದು ಅವರ ಮುಖ್ಯ ಧ್ಯೇಯ. ಅವರ ಸಂಪಾದಕೀಯ ಶೈಲಿ ಸ್ಪಷ್ಟ, ಜವಾಬ್ದಾರಿಯುತ ಮತ್ತು ಓದುಗರನ್ನು ಜತೆಗೇ ಸಾಗಿಸುವಂತಿದೆ. ಮಟ್ಟೂರು ಪ್ರದೇಶದಲ್ಲಿ ನಂಬಿಕೆ, ನಿಷ್ಠೆ ಮತ್ತು ಸೇವಾಭಾವನೆಗೆ ಪ್ರತೀಕವಾಗಿ ಗುರುತಿಸಿಕೊಂಡಿರುವ ಹನುಮಂತ ನಾಯಕರವರು, ತಮ್ಮ ಮಾಧ್ಯಮದ ಮೂಲಕ ಸಮಾಜದ ಒಗ್ಗಟ್ಟು, ಸಂಸ್ಕೃತಿ ಸಂರಕ್ಷಣೆ ಮತ್ತು ಜನಜಾಗೃತಿ ಮೂಡಿಸುವ ಪ್ರಯತ್ನಗಳಲ್ಲಿ ಸದಾ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಗ್ರಾಮದ ಅಭಿವೃದ್ದಿಗಾಗಿ ತಮ್ಮ ಜ್ಞಾನ, ಸಮಯ ಮತ್ತು ಶ್ರಮವನ್ನು ವಿನಯದಿಂದ ಹೂಡುತ್ತಿರುವ ಅವರ ಕೆಲಸವು ಮಟ್ಟುರು ಸಮುದಾಯಕ್ಕೆ ಅಮೂಲ್ಯ ಕೊಡುಗೆಯಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!