Uncategorized

ಸರ್ಕಾರಿ ನಿವೃತ್ತ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ

ಹನುಮಂತ ನಾಯಕ ಸಂಪಾದಕ.       9739109997

ಲಿಂಗಸ್ಗೂರು: ಕರ್ನಾಟಕ ರಾಜ್ಯದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನೌಕರರಿಗೆ ಅತ್ಯವಶ್ಯವಾದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಸಹಾಯಕ ಆಯುಕ್ತರಾದ ಬಸವಣ್ಣೆಪ್ಪ ಕಲಶೆಟ್ಟಿ ಮೂಲಕ ಮನವಿ ಸಲ್ಲಿಸಲಾಯಿತು. ವಿವಿಧ ಬೇಡಿಕೆಗಳಾದ ನಗದುರಹಿತ ಆರೋಗ್ಯ ಭಾಗ್ಯ” ಅಂದರೆ “ಸಂಧ್ಯಾಕಿರಣ” ಯೋಜನೆಯನ್ನು ರಾಜ್ಯದ ನಿವೃತ್ತ ಸರಕಾರಿ ನೌಕರರಿಗೂ ಅನ್ವಯಿಸುವಂತೆ ಜಾರಿಗೊಳಿಸುವುದು, 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 70 ವರ್ಷ ವಯೋಮಾನದ ನಿವೃತ್ತ ನೌಕರರಿಗೆ ಶೇ.10 ರಷ್ಟು ವೇತನ ಹೆಚ್ಚಿಸಿ ಆದೇಶಿಸುವುದು, ಮಾನ್ಯ ಘನತೆವೆತ್ತ ನ್ಯಾಯಾಲಯಗಳ ತೀರ್ಪುಗಳಂತೆ 10 ವರ್ಷ 8 ತಿಂಗಳ ಅವಧಿಗೆ ಕಮ್ಯೂಟೇಷನ್ ಹಣದ ಕಟಾವು ಮಾಡುವುದನ್ನು ನಿಲ್ಲಿಸುವುದು, 7ನೇ ವೇತನ ಆಯೋಗದ ಶಿಫಾರಸ್ಸನಂತೆ ದಿನಾಂಕ 01.07.2022 ರಿಂದ 31.07.20245 ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ಆರ್ಥಿಕ ನಷ್ಟ ಉಂಟಾಗಿದೆ. ಕಾರಣ ಈ ಅವಧಿಯ ಮೊದಲ ಮತ್ತು ನಂತರದಲ್ಲಿ ನಿವೃತ್ತರಾದ ನೌಕರರಿಗೆ ಸಿಗಬಹುದಾದ DCRG, CVP, EL Encashment Benefit ಗಳನ್ನು ಅನ್ವಯಿಸುವಂತೆ ಮಂಜೂರಿಸಿ ಆದೇಶಿಸುವಂತೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಅಮರೇಶಪ್ಪ ಹೂನೂರ, ಸಿದ್ರಾಮಪ್ಪ ಕಾಡಲೂರ್, ಶರಣಬಸವರಾಜ ನಾಡಗೌಡ, ಜಯಸಿಂಗ್ ಠಾಕೂರ, ಹಾಜಿಮಲಂಗ ಬಾಬಾ, ಹನಮಂತಪ್ಪ ಮೇಟಿ, ಯಲ್ಲಪ್ಪ, ಹಾಜಿಬಾಬು, ಮೆಹಬೂಬ್ ಬೇಗ, ಶಿವರಾಜ್, ಚಂದ್ರಶೇಖರ್, ಶಿವಪುತ್ರಪ್ಪ ಬೆಳ್ಳಿಗನೂರ, ಶರಣಪ್ಪ ಕಗ್ಗಲ, ಕುಮಾರಸ್ವಾಮಿ, ಶಾಂತಾಬಾಯಿ, ಗೀತಾ ಹಾಗೂ ನೂರಾರು ನಿವೃತ್ತ ನೌಕರರು ಭಾಗವಹಿಸಿದ್ದರು.

Hanumanth Nayaka

ಹನುಮಂತ ನಾಯಕ ಮಟ್ಟೂರಿನ ಸಾಂಸ್ಕೃತಿಕ ಪರಂಪರೆ ಮತ್ತು ಸಮಾಜಮುಖಿ ಚಟುವಟಿಕೆಗಳಿಗೆ ಶಕ್ತಿ ತುಂಬುತ್ತಿರುವ ಪ್ರಮುಖ ವ್ಯಕ್ತಿಗಳಲ್ಲೊಬ್ಬರಾದ ಹನುಮಂತ ನಾಯಕರು, “ಕಲ್ಯಾಣ ವೈಭವ” ಪತ್ರಿಕೆಯ ಗೌರವಾನ್ವಿತ ಸಂಪಾದಕರಾಗಿದ್ದಾರೆ. ಸಮೂಹ ಸೇವೆ, ಮಾಹಿತಿ ಹಂಚಿಕೆ ಮತ್ತು ಗ್ರಾಮೀಣ ಅಭ್ಯುದಯದ ಬಗ್ಗೆ ಅವರಿಗಿರುವ ಗಾಢ ಬದ್ಧತೆ ಅವರಿಗೆ ವಿಶಿಷ್ಟ ಗುರುತನ್ನು ತಂದಿದೆ. ಸಮಾಜದ ಪ್ರತಿಯೊಂದು ಮುಖ್ಯ ಕ್ಷಣ—ಮದುವೆ ಸಮಾರಂಭಗಳು, ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರತಿಭಾವಂತರ ಸಾಧನೆಗಳು ಮತ್ತು ಗ್ರಾಮಾಭಿವೃದ್ಧಿ ಚಟುವಟಿಕೆಗಳನ್ನು ನಿಖರವಾಗಿ ದಾಖಲಿಸಿ ಜನತೆಗೆ ತಲುಪಿಸುವುದು ಅವರ ಮುಖ್ಯ ಧ್ಯೇಯ. ಅವರ ಸಂಪಾದಕೀಯ ಶೈಲಿ ಸ್ಪಷ್ಟ, ಜವಾಬ್ದಾರಿಯುತ ಮತ್ತು ಓದುಗರನ್ನು ಜತೆಗೇ ಸಾಗಿಸುವಂತಿದೆ. ಮಟ್ಟೂರು ಪ್ರದೇಶದಲ್ಲಿ ನಂಬಿಕೆ, ನಿಷ್ಠೆ ಮತ್ತು ಸೇವಾಭಾವನೆಗೆ ಪ್ರತೀಕವಾಗಿ ಗುರುತಿಸಿಕೊಂಡಿರುವ ಹನುಮಂತ ನಾಯಕರವರು, ತಮ್ಮ ಮಾಧ್ಯಮದ ಮೂಲಕ ಸಮಾಜದ ಒಗ್ಗಟ್ಟು, ಸಂಸ್ಕೃತಿ ಸಂರಕ್ಷಣೆ ಮತ್ತು ಜನಜಾಗೃತಿ ಮೂಡಿಸುವ ಪ್ರಯತ್ನಗಳಲ್ಲಿ ಸದಾ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಗ್ರಾಮದ ಅಭಿವೃದ್ದಿಗಾಗಿ ತಮ್ಮ ಜ್ಞಾನ, ಸಮಯ ಮತ್ತು ಶ್ರಮವನ್ನು ವಿನಯದಿಂದ ಹೂಡುತ್ತಿರುವ ಅವರ ಕೆಲಸವು ಮಟ್ಟುರು ಸಮುದಾಯಕ್ಕೆ ಅಮೂಲ್ಯ ಕೊಡುಗೆಯಾಗಿದೆ.

Related Articles

Leave a Reply

Your email address will not be published. Required fields are marked *

Check Also
Close
  • .
Back to top button
error: Content is protected !!