Uncategorized

ರಾಷ್ಟ್ರ ಮಟ್ಟದ ಸಮಾಜ ಸೇವಾ ರತ್ನ ಪ್ರಶಸ್ತಿಗೆ ಸಾಬ ಹುಸೇನ ಆಯ್ಕೆ

ಹನುಮಂತ ನಾಯಕ ಸಂಪಾದಕ.     9739109997

ಮುದಗಲ್ – ಸಮಾಜ ಸೇವಕರಾಗಿ ಹಲವಾರು ಸಮಾಜದ ಕಾರ್ಯ ಹಾಗೂ ಊರಿನ ಮೂಲಭೂತ ಸೌಕರ್ಯಕ್ಕಾಗಿ ಕರ್ನಾಟಕ ರಕ್ಷಣೆ ವೇದಿಕೆ ಸ್ವಾಭಿಮಾನಿ ಸೇನಾ ಸಂಘಟನೆ ಮುಖಾಂತರ ಹೋರಾಟ ಮಾಡಿದ ಶ್ರೀ ಸಾಬ ಹುಸೇನ ಅವರಿಗೆ ರಾಷ್ಟ್ರ ಮಟ್ಟದ ಸಮಾಜ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ

ಪ್ರಸ್ತುತ ಮುದಗಲ್ ಪಟ್ಟಣದಲ್ಲಿ ವಾಸಿಸುತ್ತಿದ್ದು, ಕರವೇ ನಗರ ಘಟಕದ ಅಧ್ಯಕ್ಷರಾಗಿ ಸುಮಾರು ೧೮ ವರ್ಷಗಳಿಂದ ಹಲವಾರು ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಸಮಾಜಸೇವೆಯಲ್ಲಿ ನಿರತರಾಗಿದ್ದು, ಸಮಾಜಕ್ಕೆ ಮಾದರಿಯಾಗಿದ್ದಾರೆ. ಇವರ ಸಾಮಾಜಿಕ ಚಟುವಟಿಕೆ ಗಳನ್ನು ಪರಿಗಣಿಸಿ ಬೆಳಕು ಸಾಂಸ್ಕೃತಿಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಕನ್ನಡ ನಾಡು-ನುಡಿ, ಸಂಗೀತ, ಕಲೆ, ಶಿಕ್ಷಣ ಸಂಘಟನೆ, ಹೀಗೆ ವಿವಿಧ ಲಲಿತ ಕಲಾ ಪ್ರಕಾರ ಗಳಲ್ಲಿನ ಸಾಧಕರನ್ನು ಆಯ್ಕೆ ಮಾಡಲಾಗುತ್ತಿದೆ. ಇವರನ್ನು ಸಾಹಿತ್ಯ, ಸಂಸ್ಥೆಯ ೧೨೦ನೇ ರಾಷ್ಟ್ರಮಟ್ಟದ ಬೆಳಕು ಸಮ್ಮೇಳನ ಕಾರ್ಯಕ್ರಮದಲ್ಲಿ ಸೆ. ೨೧ರಂದು ರಾಯಚೂರು ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮAದಿರದಲ್ಲಿ ಜರುಗುತ್ತಿರುವ ರಾಷ್ಟ್ರಮಟ್ಟದ ಬೆಳಕು ಸಮ್ಮೇಳನದಲ್ಲಿ ರಾಷ್ಟ್ರಮಟ್ಟದ ಕಾಯಕ ಕಣ್ಮಣಿ ಪ್ರಶಸ್ತಿ ನೀಡಲಾಗುವುದು ಎಂದು ಬೆಳಕು ಸಂಸ್ಥೆಯ ಸಂಸ್ಥಾಪಕ ಅಣ್ಣಪ್ಪ ಮೇಟಿ ತಿಳಿಸಿದ್ದಾರೆ.

Hanumanth Nayaka

ಹನುಮಂತ ನಾಯಕ ಮಟ್ಟೂರಿನ ಸಾಂಸ್ಕೃತಿಕ ಪರಂಪರೆ ಮತ್ತು ಸಮಾಜಮುಖಿ ಚಟುವಟಿಕೆಗಳಿಗೆ ಶಕ್ತಿ ತುಂಬುತ್ತಿರುವ ಪ್ರಮುಖ ವ್ಯಕ್ತಿಗಳಲ್ಲೊಬ್ಬರಾದ ಹನುಮಂತ ನಾಯಕರು, “ಕಲ್ಯಾಣ ವೈಭವ” ಪತ್ರಿಕೆಯ ಗೌರವಾನ್ವಿತ ಸಂಪಾದಕರಾಗಿದ್ದಾರೆ. ಸಮೂಹ ಸೇವೆ, ಮಾಹಿತಿ ಹಂಚಿಕೆ ಮತ್ತು ಗ್ರಾಮೀಣ ಅಭ್ಯುದಯದ ಬಗ್ಗೆ ಅವರಿಗಿರುವ ಗಾಢ ಬದ್ಧತೆ ಅವರಿಗೆ ವಿಶಿಷ್ಟ ಗುರುತನ್ನು ತಂದಿದೆ. ಸಮಾಜದ ಪ್ರತಿಯೊಂದು ಮುಖ್ಯ ಕ್ಷಣ—ಮದುವೆ ಸಮಾರಂಭಗಳು, ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರತಿಭಾವಂತರ ಸಾಧನೆಗಳು ಮತ್ತು ಗ್ರಾಮಾಭಿವೃದ್ಧಿ ಚಟುವಟಿಕೆಗಳನ್ನು ನಿಖರವಾಗಿ ದಾಖಲಿಸಿ ಜನತೆಗೆ ತಲುಪಿಸುವುದು ಅವರ ಮುಖ್ಯ ಧ್ಯೇಯ. ಅವರ ಸಂಪಾದಕೀಯ ಶೈಲಿ ಸ್ಪಷ್ಟ, ಜವಾಬ್ದಾರಿಯುತ ಮತ್ತು ಓದುಗರನ್ನು ಜತೆಗೇ ಸಾಗಿಸುವಂತಿದೆ. ಮಟ್ಟೂರು ಪ್ರದೇಶದಲ್ಲಿ ನಂಬಿಕೆ, ನಿಷ್ಠೆ ಮತ್ತು ಸೇವಾಭಾವನೆಗೆ ಪ್ರತೀಕವಾಗಿ ಗುರುತಿಸಿಕೊಂಡಿರುವ ಹನುಮಂತ ನಾಯಕರವರು, ತಮ್ಮ ಮಾಧ್ಯಮದ ಮೂಲಕ ಸಮಾಜದ ಒಗ್ಗಟ್ಟು, ಸಂಸ್ಕೃತಿ ಸಂರಕ್ಷಣೆ ಮತ್ತು ಜನಜಾಗೃತಿ ಮೂಡಿಸುವ ಪ್ರಯತ್ನಗಳಲ್ಲಿ ಸದಾ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಗ್ರಾಮದ ಅಭಿವೃದ್ದಿಗಾಗಿ ತಮ್ಮ ಜ್ಞಾನ, ಸಮಯ ಮತ್ತು ಶ್ರಮವನ್ನು ವಿನಯದಿಂದ ಹೂಡುತ್ತಿರುವ ಅವರ ಕೆಲಸವು ಮಟ್ಟುರು ಸಮುದಾಯಕ್ಕೆ ಅಮೂಲ್ಯ ಕೊಡುಗೆಯಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!