Uncategorized

18 ರಂದು ಮುದಗಲ್ ಬಂದ್

ಹನುಮಂತ ನಾಯಕ ಸಂಪಾದಕ.     9739109997

ಮುದಗಲ್ ತಾಲೂಕು, ಕೋಟೆ ಉತ್ಸವ, ನೀರಿಗೆ ಒತ್ತಾಯಿಸಿ ಬಂದ್ ಕರೆ

ಮುದಗಲ್ : ಐತಿಹಾಸಿಕ ಮುದಗಲ್ ಪಟ್ಟಣವು ತಾಲೂಕು ಕೇಂದ್ರವಾಗಲು ಎಲ್ಲಾ ಅರ್ಹತೆ ಮತ್ತು ಮಾನದಂಡಗಳನ್ನು ಹೊಂದಿದ್ದರೂ ಕೂಡ ರಾಜಕೀಯ ಇಛ್ಛಾಶಕ್ತಿ ಕೊರತೆಯಿಂದ ತಾಲೂಕು ಘೋಷಣೆಯಿಂದ ವಂಚಿತವಾಗಿದ್ದು 18 ರಂದು ಮುದಗಲ್ ಪಟ್ಟಣವನ್ನು ಬಂದ್ ಮಾಡುವುದರ ಮೂಲಕ ನಮ್ಮ ಹೋರಾಟವನ್ನು ಗಟ್ಟಿಗೊಳಿಸಲಾಗುವುದು ಎಂದು ತಾಲೂಕು ಹೋರಾಟ ಸಮಿತಿ ಪದಾಧಿಕಾರಿ ಶರಣಪ್ಪ ಕಟ್ಟಿಮನಿ ಸೋಮುವಾರ ಹೇಳಿದರು. ಮುದಗಲ್ ನ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕಳೆದ ೨೦೨೩ ರ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷದ ರಾಜ್ಯ ಮಟ್ಟದ ನಾಯಕರುಗಳು ಅಧಿಕಾರಕ್ಕಾಗಿ ಮುದಗಲ್ ತಾಲೂಕು ಕೇಂದ್ರದ ಘೋಷಣೆ, ಕೋಟೆ ಉತ್ಸವ, ಸಮರ್ಪಕ ಕುಡಿಯುವ ನೀರಿನ ಯೋಜನೆ ಅನುಷ್ಠಾನಗಳುಳ್ಳ ಟೊಳ್ಳು ಭರವಸೆಗಳ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದರೂ ಕೂಡ ಪಟ್ಟಣದ ಜನತೆಯ ಕನಸಿನ ಕೂಸಿನ ಯೋಜನೆಗಳ ಜೊತೆ ಚೆಲ್ಲಾಟ ವಾಡುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. 18 ರಂಧು ನಡೆಯುವ ಮುದಗಲ್ ಬಂದ್ ಗೆ ಪ್ರಗತಿಪರ, ಕನ್ನಡಪರ, ರೈತಪರ, ದಲಿತಪರ ಸೇರಿದಂತೆ 19 ಕ್ಕೂ ಹೆಚ್ಚು ಸಂಘಟನೆಗಳು ಭಾಗಿಯಾಗಲಿದ್ದು ಅಂಗಡಿ ಮುಂಗಟ್ಟುಗಳ ಮಾಲೀಕರು ಸ್ವಯಂ ಪ್ರೇರಿತರಾಗಿ ಬಂದ್ ಗೆ ಬೆಂಬಲಿಸಿದ್ದು ಶಾಂತಿಯುತವಾಗಿ ಬಂದ್ ಗೆ ನಡೆಸಲಾಗುವುದು ಎಂದರು. ಪಕ್ಷಾತೀತವಾಗಿ 18 ರಂದು ನಡೆಯುವ ಈ ಹೋರಾಟಕ್ಕೆ ಹಾಲಿ ಶಾಸಕ ಮಾನಪ್ಪ ವಜ್ಜಲ್, ಮಾಜಿ ಶಾಸಕ ಡಿ.ಎಸ್. ಹುಲಗೇರಿ ಸೇರಿದಂತೆ ಪಟ್ಟಣದ ಹಿರಿಯರನ್ನು ಕೂಡ ಬೆಂಬಲಿಸುವಂತೆ ಅಹ್ವಾನಿಸಲಾಗಿದ್ದು ಕೆಲ ಮಠಾಧೀಶರು ಆಗಮಿಸಿಲಿದ್ದಾರೆ. ಕರವೇ ಘಟಕಾಧ್ಯಕ್ಷ ಎಸ್.ಎ.ನಯೀಮ್ ಮಾತನಾಡಿ, ನಮ್ಮ ಹಕ್ಕು ಪಡೆಯಲು ಪಟ್ಟಣದ ಜನತೆಯ ಹಾಗೂ ಸಂಘಟನೆಗಳ ಒಡಗೂಡಿ ಸತತವಾಗಿ ಶಾಂತಿಯುತವಾಗಿ ಪ್ರತಿಭಟಿಸಲಾಗಿದ್ದು ನಮ್ಮ ಬೇಡಿಕೆಗಳು ಸಕಾರಾತ್ಮಕವಾಗಿ ಈಡೇರದೇ ಹೋದಲ್ಲಿ ಮುಂದೆ ಕಾಂತ್ರಿಕಾರಿ ಹೋರಾಟಕ್ಕೆ ಅಣಿಯಾಗುವುದು ಎಂದು ಎಚ್ಚರಿಕೆ ನೀಡಿದರು.
18 ರಂದು ಬಂದ್ ಹಿನ್ನೆಲೆಯಲ್ಲಿ ಬಸ್ ಸೌಕರ್ಯ, ಶಾಲಾ ಕಾಲೇಜುಗಳು, ಎಪಿಎಂಸಿ ಮಾರುಕಟ್ಟೆ, ಕಿರಾಣಿ, ಬಟ್ಟೆ ಅಂಗಡಿಗಳು ಬಂದ್ ಗೆ ಬೆಂಬಲಿಸಿದ್ದು ಅಗತ್ಯ ಸೇವೆಗಳನ್ನು ಹೊರತು ಪಡಿಸಿ ಈ ಸೇವೆಗಳು ಲಭ್ಯವಿಲ್ಲ ಎಂದು ಸಂಘಟಕರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಮುಖಂಡರಾದ ಮಂಜೂರ್ ಮಿಯಾ ಮುಜಾವರ್, ರಘುವೀರ ಮೇಗಳಮನಿ, ರಹೀಂ ಶಾ ಮಕಾಂದಾರ, ಮಂಜುನಾಥ ಬನ್ನಿಗೋಳಕರ, ಬಸವರಾಜ ಬಂಕದಮನಿ, ಸಂಜಯ್ ಚೆಲುವಾದಿ, ಹನುಮಂತ ಬಡಿಗೇರ್, ರಮೇಶ ಕಂದಗಲ್, ಸಾಬು ಹುಸೇನ್, ಮಹಾಂತೇಶ ಚಟ್ಟೇರ್, ಹಾಗೂ ಇತರರಿದ್ದರು.

Hanumanth Nayaka

ಹನುಮಂತ ನಾಯಕ ಮಟ್ಟೂರಿನ ಸಾಂಸ್ಕೃತಿಕ ಪರಂಪರೆ ಮತ್ತು ಸಮಾಜಮುಖಿ ಚಟುವಟಿಕೆಗಳಿಗೆ ಶಕ್ತಿ ತುಂಬುತ್ತಿರುವ ಪ್ರಮುಖ ವ್ಯಕ್ತಿಗಳಲ್ಲೊಬ್ಬರಾದ ಹನುಮಂತ ನಾಯಕರು, “ಕಲ್ಯಾಣ ವೈಭವ” ಪತ್ರಿಕೆಯ ಗೌರವಾನ್ವಿತ ಸಂಪಾದಕರಾಗಿದ್ದಾರೆ. ಸಮೂಹ ಸೇವೆ, ಮಾಹಿತಿ ಹಂಚಿಕೆ ಮತ್ತು ಗ್ರಾಮೀಣ ಅಭ್ಯುದಯದ ಬಗ್ಗೆ ಅವರಿಗಿರುವ ಗಾಢ ಬದ್ಧತೆ ಅವರಿಗೆ ವಿಶಿಷ್ಟ ಗುರುತನ್ನು ತಂದಿದೆ. ಸಮಾಜದ ಪ್ರತಿಯೊಂದು ಮುಖ್ಯ ಕ್ಷಣ—ಮದುವೆ ಸಮಾರಂಭಗಳು, ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರತಿಭಾವಂತರ ಸಾಧನೆಗಳು ಮತ್ತು ಗ್ರಾಮಾಭಿವೃದ್ಧಿ ಚಟುವಟಿಕೆಗಳನ್ನು ನಿಖರವಾಗಿ ದಾಖಲಿಸಿ ಜನತೆಗೆ ತಲುಪಿಸುವುದು ಅವರ ಮುಖ್ಯ ಧ್ಯೇಯ. ಅವರ ಸಂಪಾದಕೀಯ ಶೈಲಿ ಸ್ಪಷ್ಟ, ಜವಾಬ್ದಾರಿಯುತ ಮತ್ತು ಓದುಗರನ್ನು ಜತೆಗೇ ಸಾಗಿಸುವಂತಿದೆ. ಮಟ್ಟೂರು ಪ್ರದೇಶದಲ್ಲಿ ನಂಬಿಕೆ, ನಿಷ್ಠೆ ಮತ್ತು ಸೇವಾಭಾವನೆಗೆ ಪ್ರತೀಕವಾಗಿ ಗುರುತಿಸಿಕೊಂಡಿರುವ ಹನುಮಂತ ನಾಯಕರವರು, ತಮ್ಮ ಮಾಧ್ಯಮದ ಮೂಲಕ ಸಮಾಜದ ಒಗ್ಗಟ್ಟು, ಸಂಸ್ಕೃತಿ ಸಂರಕ್ಷಣೆ ಮತ್ತು ಜನಜಾಗೃತಿ ಮೂಡಿಸುವ ಪ್ರಯತ್ನಗಳಲ್ಲಿ ಸದಾ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಗ್ರಾಮದ ಅಭಿವೃದ್ದಿಗಾಗಿ ತಮ್ಮ ಜ್ಞಾನ, ಸಮಯ ಮತ್ತು ಶ್ರಮವನ್ನು ವಿನಯದಿಂದ ಹೂಡುತ್ತಿರುವ ಅವರ ಕೆಲಸವು ಮಟ್ಟುರು ಸಮುದಾಯಕ್ಕೆ ಅಮೂಲ್ಯ ಕೊಡುಗೆಯಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!