Uncategorized

ಲಿಂಗಸ್ಗೂರು; ಗ್ರಾಮೀಣ ಭಾಗದಲ್ಲಿ ಮದ್ಯ ಅಕ್ರಮ ಮಾರಾಟ ತಡೆಗೆ ಮಹಿಳೆಯರಿಂದ ಒತ್ತಾಯ

ಹನುಮಂತ ನಾಯಕ ಸಂಪಾದಕ.       9739109997

ಲಿಂಗಸ್ಗೂರು: ತಾಲ್ಲೂಕಿನ ಪೂಲಭಾವಿ ಗ್ರಾಮದಲ್ಲಿ ಅಕ್ರಮ ಮದ್ಯ ಅಕ್ರಮ ಮಾರಾಟದಿಂದ ದಿನನಿತ್ಯ ಜಗಳ ಸಾರ್ವಜನಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಿದ್ದರಿಂದ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಅಬಕಾರಿ ಇಲಾಖೆ ಅವರಿಗೆ
ಪೂಲಭಾವಿ ಗ್ರಾಮಸ್ಥರು
ಮನವಿ ಸಲ್ಲಿಸಿದರು. ಇತ್ತೀಚೆಗೆ
ಯುವಕರು ಸಹ ಸಾರಾಯಿ ಚಟಕ್ಕೆ ಬಲಿಯಾಗುತ್ತಿದ್ದಾರೆ. ಇದನ್ನು ತಡೆಯಬೇಕಾದ ಅಬಕಾರಿ ಇಲಾಖೆಯು ಕಣ್ಣಿದ್ದೂ ಕುರುಡನಂತೆ ವರ್ತಿಸುತ್ತಿದೆ ಎಂದು ಗ್ರಾಮದ ಮಹಿಳೆಯರು ಕಣ್ಣೀರು ಹಾಕಿ ಅಬಕಾರಿ ಇಲಾಖೆ ಅಧಿಕಾರಿ ಲಕ್ಷ್ಮೀದೇವಿ ಹಾಗೂ ಸ್ಥಳೀಯ ಠಾಣೆಗೆ ಮನವಿ ಸಲ್ಲಿಸಿ. ಮಾತನಾಡಿದ ಗ್ರಾಮಸ್ಥರು ಪೂರ್ವಭಾವಿ ಗ್ರಾಮದಲ್ಲಿ ಸಣ್ಣ ಸಣ್ಣ ಅಂಗಡಿ ಡಬ್ಬಾ ಅಂಗಡಿಗಳಲ್ಲಿ ನಿತ್ಯ ಸಾವಿರಾರು ಬಾಟಲಿಗಳು ಮಾರಟ ಮಾಡುತ್ತಿದ್ದು. ಆದ್ದರಿಂದ ಅನೇಕ ಕುಟುಂಬಗಳು ಬೀದಿಗೆ ಬಂದಿವೆ. ಇನ್ನು ಬರುತ್ತಿದ್ದಾವೆ ಕುಡಿದು ಬಂದು ಮನೆಯಲ್ಲಿ ಜಗಳ ಆಡುತ್ತಾರೆ. ಈ ರೀತಿ ಕುಡಿದು ಗ್ರಾಮದಲ್ಲಿ ಗಲಾಟೆ ಮಾಡುತ್ತಿದ್ದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಈ ಬಗ್ಗೆ ಈಗಾಗಲೇ ಅನೇಕ ಬಾರಿ ಮನವಿ ಕೂಡ ಮಾಡಲಾಗಿತ್ತು. ಆದರೆ ಮುಚ್ಚಳಿಕೆ ಪತ್ರ ಬರೆದು ಕೊಟ್ಟಿದ್ದರು ಮರಳಿ ಗ್ರಾಮದಲ್ಲಿ ನಿತ್ಯ ಮಧ್ಯೆ ಮಾರಟ ಜಾಸ್ತಿ ಆಗುತ್ತಿದೆ. ಸಣ್ಣ ಮಕ್ಕಳು ಸಹ ಸರಾಯಿ ಚಟಕ್ಕೆ ದಾಸರಾಗುತ್ತಿರುವ ವಿದ್ಯಮಾನ ನಡೆಯುತ್ತಿರುವುದು ದುದೈರ್ವದ ಸಂಗತಿಯಾಗಿದೆ. ಈ ಗ್ರಾಮದ ವ್ಯಾಪ್ತಿಯಲ್ಲಿ ಇಂದಿನಿಂದಲೇ ಸಾರಾಯಿ ಅಕ್ರಮ ಮಾರಾಟ ನಿಲ್ಲಬೇಕು. ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳದಿದ್ದರೆ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಮಹಿಳೆಯರು ಸೇರಿದಂತೆ ಇನ್ನಿತರರು ಇದ್ದರು.

Hanumanth Nayaka

ಹನುಮಂತ ನಾಯಕ ಮಟ್ಟೂರಿನ ಸಾಂಸ್ಕೃತಿಕ ಪರಂಪರೆ ಮತ್ತು ಸಮಾಜಮುಖಿ ಚಟುವಟಿಕೆಗಳಿಗೆ ಶಕ್ತಿ ತುಂಬುತ್ತಿರುವ ಪ್ರಮುಖ ವ್ಯಕ್ತಿಗಳಲ್ಲೊಬ್ಬರಾದ ಹನುಮಂತ ನಾಯಕರು, “ಕಲ್ಯಾಣ ವೈಭವ” ಪತ್ರಿಕೆಯ ಗೌರವಾನ್ವಿತ ಸಂಪಾದಕರಾಗಿದ್ದಾರೆ. ಸಮೂಹ ಸೇವೆ, ಮಾಹಿತಿ ಹಂಚಿಕೆ ಮತ್ತು ಗ್ರಾಮೀಣ ಅಭ್ಯುದಯದ ಬಗ್ಗೆ ಅವರಿಗಿರುವ ಗಾಢ ಬದ್ಧತೆ ಅವರಿಗೆ ವಿಶಿಷ್ಟ ಗುರುತನ್ನು ತಂದಿದೆ. ಸಮಾಜದ ಪ್ರತಿಯೊಂದು ಮುಖ್ಯ ಕ್ಷಣ—ಮದುವೆ ಸಮಾರಂಭಗಳು, ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರತಿಭಾವಂತರ ಸಾಧನೆಗಳು ಮತ್ತು ಗ್ರಾಮಾಭಿವೃದ್ಧಿ ಚಟುವಟಿಕೆಗಳನ್ನು ನಿಖರವಾಗಿ ದಾಖಲಿಸಿ ಜನತೆಗೆ ತಲುಪಿಸುವುದು ಅವರ ಮುಖ್ಯ ಧ್ಯೇಯ. ಅವರ ಸಂಪಾದಕೀಯ ಶೈಲಿ ಸ್ಪಷ್ಟ, ಜವಾಬ್ದಾರಿಯುತ ಮತ್ತು ಓದುಗರನ್ನು ಜತೆಗೇ ಸಾಗಿಸುವಂತಿದೆ. ಮಟ್ಟೂರು ಪ್ರದೇಶದಲ್ಲಿ ನಂಬಿಕೆ, ನಿಷ್ಠೆ ಮತ್ತು ಸೇವಾಭಾವನೆಗೆ ಪ್ರತೀಕವಾಗಿ ಗುರುತಿಸಿಕೊಂಡಿರುವ ಹನುಮಂತ ನಾಯಕರವರು, ತಮ್ಮ ಮಾಧ್ಯಮದ ಮೂಲಕ ಸಮಾಜದ ಒಗ್ಗಟ್ಟು, ಸಂಸ್ಕೃತಿ ಸಂರಕ್ಷಣೆ ಮತ್ತು ಜನಜಾಗೃತಿ ಮೂಡಿಸುವ ಪ್ರಯತ್ನಗಳಲ್ಲಿ ಸದಾ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಗ್ರಾಮದ ಅಭಿವೃದ್ದಿಗಾಗಿ ತಮ್ಮ ಜ್ಞಾನ, ಸಮಯ ಮತ್ತು ಶ್ರಮವನ್ನು ವಿನಯದಿಂದ ಹೂಡುತ್ತಿರುವ ಅವರ ಕೆಲಸವು ಮಟ್ಟುರು ಸಮುದಾಯಕ್ಕೆ ಅಮೂಲ್ಯ ಕೊಡುಗೆಯಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!